ಇಬ್ಬನಿ

December 7, 2008

ಹಕ್ಕಿ ಮತ್ತು ಪ್ರಶ್ನೆ

Filed under: Uncategorized — kemmayi @ 2:36 pm

ಪರಿಸ್ಥಿತಿ
ಅಷ್ಟೊಂದು ಅಸಹನೀಯವಾಗದೇ
ಇರುತ್ತಿದ್ದರೆ ಆ ಹಕ್ಕಿಗೆ
ರೆಕ್ಕೆಪುಕ್ಕಗಳು ಹುಟ್ಟುತ್ತಿರಲಿಲ್ಲ
ನಭದಿ ಹಾರುತ್ತಿರಲೂ ಇರಲಿಲ್ಲ
ಈಗಲೂ ಅಷ್ಟೆ..
ತೀರಾ ಸಹನೀಯವಾಗೇನೂ ಇಲ್ಲ .
ರೆಕ್ಕೆಯಲ್ಲಿ ರಂಧ್ರಗಳು
ಕಾಣುವುದೆಷ್ಟೋ, ಕಾಣದ್ದೆಷ್ಟೋ
ದರಿದ್ರ, ಬರ, ಬಡತನ, ಕೊನೆಯಿಲ್ಲದ್ದು.
ಭ್ರಷ್ಟ, ಹೊಟ್ಟೆಬಾಕತನ ಮುಗಿಯದ್ದು.
ರೆಕ್ಕೆಯಂತೂ ಛಿದ್ರಛಿದ್ರ
ನೆತ್ತರ ಕಾರುವ ಆಕ್ರಂದನ,
ಮೇಧಾವಿಯ ಕಿವಿಗೆ ದೂರ
ಹಕ್ಕಿ ಅರಚುತ್ತಲೇ ಇದೆ.
ಚಪ್ಪಾಳೆ ಮೊಳಗುತ್ತಲೇ ಇದೆ.
ಹಕ್ಕಿಯ ಅಳಿವು-ಉಳಿವು ?

ಉಳಿದದ್ದು ಅದೊಂದೇ ಪ್ರಶ್ನೆ.

November 4, 2008

ಆಕೆಗೆ ಡಿಕ್ಕಿ ಹೊಡೆದಿದ್ದೆ !

Filed under: Uncategorized — kemmayi @ 5:02 pm

ತುಂಬಾ ದಿನ ಆಯ್ತು ನಿಮ್ಮ ಜೊತೆ ಮಾತನಾಡಿ. ಕೆಲಸದ ಒತ್ತಡಗಳು, ಹಬ್ಬದ ಗೌಜಿ ಎಲ್ಲಾ ಮುಗಿದು ಒಂದಿಷ್ಟು ನಿರುಮ್ಮಳನಾಗಿದ್ದೇನೆ. ಹಾಗಾಗಿ ಈಗ ಮತ್ತೆ  ಅಂಗಳಕ್ಕೆ ಬಂದಿದ್ದೇನೆ. ನಾನು ಈಗ ಹೇಳ ಹೊರಟಿರುವುದು ಮತ್ತದೇ ಬಾಲ್ಯದ ಬಗ್ಗೆ. ಅದಕ್ಕೆ ಕಾರಣವೂ ಇಲ್ಲದಿಲ್ಲ. ನಾನು ಬಾಲ್ಯವನ್ನು ಅದೆಷ್ಟು ಆಸ್ವಾದಿಸಿದ್ದೇನೋ, ಅಷ್ಟೇ ಬೇಗ ಬಾಲ್ಯವನ್ನು ಕಳೆದುಕೊಂಡಿದ್ದೇನೆ. ಆಗ ಹಾಕಲು ಇದ್ದದ್ದು ಮೂರೇ ಮೂರು ಚೆಡ್ಡಿ, ನಾಲ್ಕು ಅಂಗಿ. ಬ್ರಾಹ್ಮಣರಾದ ನಮಗೆ ಸರಕಾರದಿಂದ ಸಮವಸ್ತ್ರವೂ ಲಭಿಸುತ್ತಿರಲಿಲ್ಲ. ವಷ೯ಕ್ಕೊಂದು ಹೊಸ ಜೊತೆ ಧಿರಿಸು ತೆಗೆದುಕೊಂಡರೆ, ಹಳೆಯ ಒಂದು ಜೊತೆಗೆ ವಿಆರ್‍ ಎಸ್‌ ಕೊಡ್ತಾ ಇದ್ದೆ. ಆದರೆ, ನನ್ನ ಬಾಲ್ಯದ ಅವಾಂತರಗಳಿಗೆ ಏನೂ ಬರವಿರಲಿಲ್ಲ.

ನಂಗೆ ನಿದ್ದೆ ಮಾಡೋದು ಅಂದ್ರೆ ತುಂಬಾ ಆಸಕ್ತಿ. ಇದರಲ್ಲೇನೂ ವಿಶೇಷ ಇಲ್ಲ ಅಂದ್ಕೋಬೇಡಿ. ಯಾಕಂದ್ರೆ ಅದು ನಂಗೆ ಬರೇ ಆಸಕ್ತಿಯ ವಿಚಾರವಷ್ಟೇ ಆಗಿರಲಿಲ್ಲ, ಒಂದು ರೀತಿಯಲ್ಲಿ ನನಗೆ ನಿದ್ದೆ ಮಾಡೋದು ಚಾಳಿ ! ಪ್ರೈಮರಿಯಲ್ಲಿದ್ದಾಗ ನಿದ್ದೆಯಿಂದಾದ ಅವಾಂತರಗಳ ಬಗ್ಗೆ ಅಷ್ಟೊಂದು ನೆನಪಿಲ್ಲ. ಆದ್ರೆ, ಅದಕ್ಕೊಂದು ವಿಶ್ವವ್ಯಾಪಿ ಮಾನ್ಯತೆ ಸಿಕ್ಕಿದ್ದು ಡಿಗ್ರಿ ಕಾಲೇಜಿಗೆ ಸೇರಿದ ಮೇಲೆಯೇ ! ನನ್ನಿಂದ ಪ್ರಭಾವಿತರಾದವರು, ನನ್ನ ಆಟೋಗ್ರಾಫ್ ತುಂಬಾ ನನ್ನ ನಿದ್ದೆಯ ವಿವಿಧ ಭಂಗಿಗಳ ಚಿತ್ರಗಳನ್ನು ಬಿಡಿಸಿಟ್ಟಿದ್ದಾರೆ. ಅದಕ್ಕೆ ವಿವಿಧ ಹೆಸರುಗಳನ್ನೂ ಇಟ್ಟಿದ್ದಾರೆ. ಅಧ೯ಕಟಿ ನಿದ್ರಾಸನ, ಪದ್ಮ ನಿದ್ರಾಸನ, ಬೆಂಚಾಸನ, ಹೀಗೆ ಯೋಗಾಸನದ ವಿವಿಧ ಭಂಗಿಗಳನ್ನು ನಾನು ನಿದ್ದೆ ಹೊಡೆಯುವ ವಿವಿಧ ಭಂಗಿಗಳ ಜೊತೆ ಸಮೀಕರಿಸಿದ್ದಾರೆ.

ಒಂದಿನ ರಾತ್ರಿ ೭ ಗಂಟೆಗೆ ಹಾಸ್ಟೆಲ್‌ನಲ್ಲಿ ಚೇರ್‌ ಮೇಲೆ ಕುಳಿತುಕೊಂಡು ನಿದ್ದೆ ಮಾಡುತ್ತಿದೆ. ನಮ್ಮ ಹಾಸ್ಟೆಲ್ ಮೇಟ್ ಗಳು ನನ್ನ ಟೇಬಲ್ ಮೇಲೆ ಕಸದ ಬುಟ್ಗಿ, ಊಟದ ತಟ್ಟೆ , ಹಾಸಿಗೆ ಎಲ್ಲಾ ಎತ್ತಿಟ್ಟಿದ್ದರು. ವಾಡ೯ನ್‌ ಬರುವವರೆಗೆ ನಂಗೆ ಎಚ್ಚರವೇ ಇರಲಿಲ್ಲ. ಆಮೇಲೆ ಕಂಟಿನ್ಯೂಸ್ ಆಗಿ ೧೫ ದಿನ ಡೈರಿಯಿಂದ ಸೆಗಣಿ ಎತ್ತಿದ್ದೆ, ಪನಿಷ್‌ಮೆಂಟ್ !

ಅದಾಗಿ ಒಂದು ವಾರ ಕಳೆದಿರಲಿಲ್ಲ. ಸ್ಟಡಿ ಹವರ್‌ನಲ್ಲೇ ಮಲಗಿದ್ದೆ. ಮತ್ತದೇ ಗೆಳೆಯರು ನನ್ನ ಮೇಲೆ ಬಿಳಿ ಪಂಚೆ ಹೊದೆಸಿದರು. ಮತ್ಯಾರೋ ಊದುಬತ್ತಿ ಉರಿಸಿದರು. ಸಣ್ಣ ಶಲ್ಯವನ್ನು ಮಡಚಿ ನನ್ನ ಕತ್ತಿಗೆ ಹಾಕಿದರು. ಪಕ್ಕದಲ್ಲಿ ಕುಳಿತು ಅತ್ತರು. ಸಾಲದ್ದಕ್ಕೆ ಫೋಟೋ ಹೊಡೆದರು. ಇದನ್ನೆಲ್ಲಾ ಕಿಟಕಿ ಮೂಲಕ ವಾಡ೯ನ್ ನೋಡುತ್ತಿದ್ದದ್ದನ್ನು ಯಾರೂ ಗಮನಿಸಿರಲಿಲ್ಲ. ವಾಡ೯ನ್ನೂ ಕೇಳಲಿಲ್ಲ. ಆದರೆ, ಬೆಳಿಗ್ಗೆ ಬಂದವರೇ, ಗೆಸ್ಟ್ ಬಂದಿದ್ದಾರೆ ಎಂದು ಹೇಳಿ ಕ್ಯಾಮೆರಾ ತೆಗೆದುಕೊಂಡು ಹೋದರು. ಪ್ರಿನ್ಸಿಪಾಲ್ ಫೋನ್ ಮಾಡಿ ಕರೆಸಿಕೊಂಡಾಗಲೇ ನಮಗೆ ಜ್ಞಾನೋದಯವಾದದ್ದು.

ಅದು ಡಿಗ್ರಿಯ ಕೊನೆಯ ವಷ೯. ಪರೀಕ್ಷೆಗಳೆಲ್ಲಾ ಮುಗಿದಿತ್ತು. ಕಾಲೇಜಿನ ವಾಷಿ೯ಕ ಸಂಚಿಕೆ ಪೂತಿ೯ ಗೊಳಿಸಲು ನಾವಿನ್ನೂ ಹಾಸ್ಟೆಲ್‌ನಲ್ಲೇ ಇದ್ದೆವು. ಮತ್ತದೇ, ನಿದ್ದೆಯ ಮಂಪರಿನಲ್ಲಿ, ಕಾಲೇಜಿನತ್ತ ಹೆಜ್ಜೆ ಹಾಕುತ್ತಿದ್ದೆ. ಹಾಗೆ ನಡೆಯುತ್ತಿದ್ದಾಗಲೇ ಭಿಕ್ಷುಕಿಯೊಬ್ಬಳಿಗೆ ಡಿಕ್ಕಿ ಹೊಡೆದುಬಿಟ್ಟೆ. ತಗೊಳ್ಲಿ, ಜೀವನ ಪೂತಿ೯ ಖಚಿ೯ಗಾಗುವಷ್ಟು ಬೈಗುಳಗಳನ್ನು ಆಕೆ ದಾನವಾಗಿ ನೀಡಿದ್ದಳು. ಸತತ ೧೩ ದಿನವೂ ಬೆಳಿಗ್ಗೆ ಕಾಲೇಜಿಗೆ ಹೋಗುವಾಗ ಆಕೆಯಿಂದ ಉಗಿಸಿಕೊಳ್ಳುವ ಭಾಗ್ಯ ನನ್ನದಾಗಿತ್ತು ! ಅದೇ ಕೊನೆ, ಆಮೇಲೆ ಯಾವತ್ತೂ ಅತಿರೇಕವಾಗಿ ನಿದ್ದೆ ಮಾಡಿಲ್ಲ. ಪತ್ರಿಕೋದ್ಯಮ ಕ್ಷೇತ್ರದಲ್ಲಿರೋದ್ರಿಂದ ಅದಕ್ಕೆ ಅವಕಾಶವೂ ಕಡಿಮೆಯೇ. ನನ್ನ ನಿದ್ರಾಸನಗಳ ಬಗ್ಗೆ ದೊಡ್ಡ ಪುಸ್ತಕ (?) ಬರೆದು, ಲೋಕಾಪ೯ಣೆ ಮಾಡಬೇಕೆಂದಿದ್ದೇನೆ. ನನ್ನ ಹಾಗೆ ನಿಮಗೂ ನಿದ್ದೆಯಿಂದ ಪ್ರಯೋಜನಗಳಾಗಿದ್ದರೆ, ಬರೆದು ತಿಳಿಸಿ.

September 17, 2008

ಅವಳು ಮತ್ತು ಪ್ರೀತಿ

Filed under: Uncategorized — kemmayi @ 6:41 pm

ಆಕೆ ಅವನ ಬಳಿ ತುಟಿ ಬಿಚ್ಚಿ ಮಾತನಾಡದಿದ್ದರೂ, ಕಣ್ಣಿನ ಮಾತುಗಳು ಸಾವಿರ ಪದಗಳನ್ನು ಮೀರಿಸಿದ್ದವು. ಪ್ರೀತಿಯ ದ್ಯೋತಕವಾಗಿ ಮಳ್ಳಿಗೆಯ ಬಳ್ಳಿಯನ್ನು ಆಕೆಗೆ ನೀಡಿ ಬೇಗ ಬರುವೆನೆಂದು ತಿಳಿಸಿ ಊರಿಗೆ ಮರಳಿದ. ಆಕೆ ಅದನ್ನು ಜೋಪಾನವಾಗಿ ಬೆಳೆಸಿದಳು. ಬಳ್ಳಿ ಮಾವಿನ ಮರದ ಆಸರೆಯಲ್ಲಿ ವಿಸ್ತಾರವಾಗಿ ಬೆಳೆಯಿತು.

ಮೊಗ್ಗಾಯಿತು….ಹೂವಾಯಿತು…..ಬಾಡಿತು. ಆತನ ಸುಳಿವಿಲ್ಲ. ಅವನ ನೆನಪು ಮಾಸದಾದಾಗ ಅಕ್ಕನ ಕಂದನಿಗೆ ಆಸರೆಯಾದಳು. ಆ ಕಂದನ ಕಣ್ಣಲ್ಲಿ ಅವನ ಬಿಂಬ ಕಾಣುತ್ತಿದ್ದಳು. ಕಾಯುತ್ತಿದ್ದಳು. ಕೊನೆಗೂ ಆತ ಬಂದನೇ ಬಂದ. ಮಲ್ಲಿಗೆಯ ಬಳ್ಳಿ ಬಾಡಿತ್ತು. ಅದರ ಹಿಂದೆ ನಿಂತು ದಿಟ್ಟಿಸಿದ. ಇವಳ ಮಡಿಲಲ್ಲಿ ಕಿಲಕಿಲ ನಗುತ್ತಿತ್ತು ಮುದ್ದುಕಂದ. ಆತನ ಪ್ರೀತಿಯ ಕುಸುಮ ಅರಳುವ ಮೊದಲೇ ಬಾಡಿತ್ತು..ಬಂದ ದಾರಿಯಲ್ಲೇ ಹಿಂತಿರುಗಿದ. ಮಲ್ಲಿಗೆ ಬಳ್ಳಿಯ ಆಸರೆ ಕೊಂಡಿ ಕಳಚಿ ಬಿತ್ತು. ಪುನ ಆಕೆ ಅವನಿಗಾಗಿ ಅಲ್ಲೇ ಕಾದಳು.

September 15, 2008

ಅಬ್ಬಾ ! ಅದೆಂಥಾ ರಭಸ

Filed under: Uncategorized — kemmayi @ 6:00 pm

ಮೊನ್ನೆ ಮಂಗಳೂರಿನಲ್ಲಿ ಮಳೆ ಜೋರಾಗಿತ್ತು. ಜಿಲ್ಲೆಯ ಐದೂ ನದಿಗಳು ತುಂಬಿ ಹರಿಯುತ್ತಿದ್ದವು. ಅಲ್ಲಿ ದುರಂತವೊಂದು ಸಂಭವಿಸಿತ್ತು. ಶಾಲೆಗೆಂದು ಹೊರಟ ಮಕ್ಕಳು ಮರಳಿ ಮನೆಗೆ ಬರಲೇ ಇಲ್ಲ. ಫಲ್ಗುಣಿ ನದಿಯಲ್ಲಿ ಮುಳುಗಿದ ಅವರ ಶಾಲಾ ಬಸ್ಸುಆ ಮಕ್ಕಳ ಪ್ರಾಣವನ್ನೇ ಬಲಿ ತೆಗೆದುಕೊಂಡಿತ್ತು. ಸ್ವಾತಂತ್ರ್ಯೋತ್ಸವಕ್ಕೆ ಅಣಿಯಾಗುತ್ತಿದ್ದ ಮಕ್ಕಳು ಈ ಲೋಕವನ್ನೇ ಬಿಟ್ಟು ಹೋದರು.
ಆ ಮಕ್ಕಳು ಉಜ್ವಲ ಭವಿಷ್ಯವನ್ನು ಅರಸುತ್ತಾ ಶಾಲೆಗೆ ತೆರಳುತ್ತಿದ್ದರು. ಸ್ವಾತಂತ್ರ್ಯದ ಸಂಭ್ರಮ ಅವರಲ್ಲಿ ಮನೆ ಮಾಡಿತ್ತು… ಎಂದಿನಂತೆ ಶಾಲಾ ವಾಹನದಲ್ಲಿ ಕುಣಿಯುತ್ತಾ ನಲಿಯುತ್ತಾ ಹೋಗುತ್ತಿದ್ದರು. ಮಂಗಳೂರಿನ ಗುರುಪುರದ ಸಮೀಪ ಉಲ್ಲಾಯಿಬೆಟ್ಟಿನ ಬಾಮಿ ಬಳಿ ಅವರ ಬಸ್ಸು ಬರುತ್ತಿದ್ದಂತೆಯೇ ಅದು ಫಲ್ಗುಣಿ ನದಿಗೆ ಬತ್ತು. ನಿತ್ಯ ಫಲ್ಗುಣಿಯ ಹರಿವನ್ನು ನೋಡಿ ಖುಷಿ ಪಡುತ್ತಿದ್ದ ಮಕ್ಕಳಿಗೆ, ಗುರುವಾರ ಅದೇ ಫಲ್ಗುಣಿ ಮೃತ್ಯು ದೇವತೆಯಾಗಿ ಅವತರಿಸಿದ್ದಳು.
ಅ ಚಿತ್ರಗಳು ನನ್ನ ಕಣ್ಣ ಮುಂದೆ ಬಂದದ್ದೆ ತಡ, ಅರಿವಿಲ್ಲದೆ ನನ್ನ ಕಣ್ಣಲ್ಲಿ ಕಂಬನಿ ಹರಿಯ ತೊಡಗಿತ್ತು. ತುಂಬಾ ವರ್ಷದ ಬಳಿಕ ನಾನು ಬಾಲ್ಯದ ನೆನಪುಗಳನ್ನು ಮೆಲುಕು ಹಾಕತೊಡಗಿದೆ. ನಾನೂ ಅಷ್ಟೆ, ಚಿಕ್ಕವನಿದ್ದಾಗ ಚಡ್ಡಿ ಹಾಕಿಕೊಂಡು ಶಾಲೆಗೆ ಹೋಗುತ್ತಿದ್ದಾಗ, ಕೆರೆ ತೊರೆಗಳನ್ನು ದಾಟಿಕೊಂಡು ಹೋಗಬೇಕಿತ್ತು. ಕರಾವಳಿಯ ಮಳೆ ಅಂದರೆ, ಅದು ಭೋರ್ಗರೆತ. ಅದೂ ಹದಿನೈದು ವರ್ಷಗಳ ಹಿಂದಿನ ಮಳೆ. ಗುಡ್ಡ, ಕಾಡು ಮೇಡುಗಳನ್ನು ಹತ್ತಿ ಇಳಿದು ಶಾಲೆಗೆ ಹೋಗಬೇಕಿತ್ತು. ಒಂದೊಂದು ಸಲ ತೊರೆಗಳೆಲ್ಲ ತುಂಬಿ ಹರಿಯುತ್ತಿದ್ದವು. ಮಳೆ ನಿಂತು ಉಬ್ಬರ ಕಡಿಮೆಯಾದ ಬಳಿಕ ಮನೆ ತಲುಪಿ ಕೊಳ್ಳುತ್ತಿದ್ದೆವು. ಆ ಕಡೆಯಿಂದ ಅಜ್ಜ ಟಾರ್ಚು ಹಿಡಿದು ಕೊಂಡು ಬಂದ ದಿನಗಳೂ ಬಹಳಷ್ಟಿವೆ. ಮೊನ್ನೆಯ ಘಟನೆ ನೋಡಿದ ತಕ್ಷಣ ನನ್ನ ಮನಸ್ಸಿಗೆ ಬಂದದ್ದು ನಾನು ಬಾಲ್ಯದಲ್ಲಿ ಕಳೆದ ಆ ದಿನಗಳು. ಒಂದು ವೇಳೆ, ನಾನೂ ತೊರೆ ದಾಟುವಾಗ ಕೊಚ್ಚಿ ಹೋಗುತ್ತಿದ್ದರೆ ?

ಪಾಪ ಆ ಮಕ್ಕಳಿಗೆ ಬಸ್ಸಾದರೂ ಇತ್ತು. ನಾವು ನಡೆದುಕೊಂಡೇ ಬರಬೇಕಿತ್ತು. ಗುಡ್ಡದಿಂದ ನೀರು ಸರಾಗವಾಗಿ ಹರಿದು ಹೋಗುವ ಕರಣ, ಒಮ್ಮೆ ನೀರಿಗೆ ಬಿದ್ದರೆ ಸಾಕಿತ್ತು, ಅದರಿಂದ ಮೇಲೆಳುವುದಂತು ಸಾಧ್ಯವೇ ಇರಲಿಲ್ಲ. ಅಬ್ಬಾ ! ಅದನ್ನು ನೆನೆಸಿಕೊಂಡರೆ ಸಾಕು, ಮೈಎಲ್ಲ ಜುಮ್ ಅನ್ನುತ್ತದೆ. ಅ ಮಕ್ಕಳನ್ನು ನೋಡಿದಾಗ ನಂಗೆ ನೆನಪಾದದ್ದು ನನ್ನ ಬಾಲ್ಯ, ಆ ಭಯ. ಅದನ್ನು ನಿಮ್ಮ ಜೊತೆ ಹೇಳಿ ಕೊಳ್ಳಬೇಕಿತ್ತು ಅಷ್ಟೆ.

April 20, 2008

ಹೌದು….. ನೀನ್ಯಾಕೆ ಒಲಿಯಬಾರದು ?

Filed under: Uncategorized — kemmayi @ 2:55 pm

ನೋಡದ ಹುಡುಗಿಗೆ….,

ನೀನು ಹೇಗಿದ್ದೀಯೋ ಗೊತ್ತಿಲ್ಲ, ಎಲ್ಲಿದ್ದಿ ಅಂತ ಮಾತ್ರ ಗೊತ್ತು. ನಿನ್ನ ನೋಡೂ ಇಲ್ಲ. ಆದರೆ, ಲೆಕ್ಕವಿಲ್ಲದಷ್ಟು ಬಾರಿ ಮಾತನಾಡಿದ್ದೇನೆ. ಯಾರೇ ನೀನು ಚೆಲುವೆಯ ರವಿಚಂದ್ರನ್ ಥರಾ ಆಗಿದೆ ನನ್ನ ಸ್ಥಿತಿ. ಪ್ರೀತಿಸಬೇಕು ಅಂತ ಬಯಸಿದ್ದೇನೆ. ಹಾಗೆ ಬಯಸುವುದರಲ್ಲಿ ತಪ್ಪೇನಿದೆ ಹೇಳು ?

ದೇವರಿದ್ದಾನೋ……… ಇಲ್ಲವೋ ? ವಾದ ಮಾಡುವವರು ಮಾಡುತ್ತಲೇ ಇರಲಿ ನಂಗಂತೂ ನೀನೇ ದೇವತೆ. ನಿನ್ನನ್ನೇ ಪೂಜಿಸುತ್ತೇನೆ. ನಿನಗೇ ಸಂಪೂರ್ಣ ನಿಷ್ಠನಾಗಿದ್ದೇನೆ. ಹಾಗಂತ ನಿನ್ನ ಎದುರಿಗೇ ಕುಳಿತು, ನಿನ್ನ ಕಣ್ಣಲ್ಲಿ ಕಣ್ಣಿಟ್ಟು ಹೇಳಬೇಕು ಅಂತ ಅಂದುಕೊಳ್ಳುತ್ತೇನೆ. ಅದರೇನು ಮಾಡಲಿ, ಏಳು ಸಮುದ್ರ ದಾಟಿ ಬರಬಲ್ಲೆ, ಆದರೆ ಈ ಬಂಜರು ಭೂಮಿ ದಾಟಿ ಬರುವುದೇ ಸಮಸ್ಯೆ ನೋಡು.

ನಿನಗಾದರೂ ಏನು ಕಮ್ಮಿ ಹೋಳು. ಮಲೆನಾಡಿನ ಹುಡುಗಿ. ಕಣ್ಣು ಹಾಯಿಸಿದಷ್ಟು ದೂರಕ್ಕೂ ಹಸಿರ ಪಲ್ಲಂಗ, ಹೆಜ್ಜೆಯಿಟ್ಟಲ್ಲೆಲ್ಲಾ ನೀರು. ಈಗಂತೂ ಮಳೆಯ ಹಾಡು. ನನ್ನ ಅವಸ್ಠೆ ಕೇಳಿಲ್ಲಿ….. ಮಳೆ ಬಿಡು ಇಬ್ಬನಿಯ ಹನಿಯೂ ಇಲ್ಲ. ಬರೀ ಬೋಲು ಗುಡ್ಡಗಳ ಸಾಲು. ಒಂದಾನೊಂದು ಕಾಲವಿತ್ತು. ಮಳೆಬಂದರೆ ಸಾಕು, ಮನಸೋ ಇಚ್ಚೆ ಮುಂಗಾರಿನ ಅಂಗಳದಲ್ಲಿ ಕುಣಿಯುತ್ತಿದ್ದೆ. ಮೊದಲ ಮಳೆಗೆ ಬೀಳುವ ಆಲಿಕಲ್ಲು ಹೆಕ್ಕಿಕೊಳ್ಳಲು ಹಪಹಪಿಸುತ್ತಿದ್ದೆ. ಶಾಲೆಯೊಳಗಡೆ ನೀರು ಬಂದರೆ ಸಾಕು, ನೋಟು ಪುಸ್ತಕದ ಹಾಳೆಗಳು ದೋಣಿ ಗಳಾಗುತ್ತಿದ್ದವು. ಮನ್ಗೆ ಬಂದರೆ, ಅಜ್ಜನ ಹುಳಿ ಅಡರಿನ ಏಟು ಕಾಯ್ತಾ ಇರುತ್ತಿತ್ತು. ಈಗ ಹಾಗಲ್ಲ ನೋಡು. ಇಲ್ಲಿ ಮಳೆ ಒಲಿಯುವುದೇ ಇಲ್ಲ, ಹೌದು….. ನೀನ್ಯಾಕೆ ಒಲಿಯಬಾರದು ?

ನಿನ್ನ ಪೆದ್ದು ಹುಡುಗ

August 6, 2007

ಈ ಪ್ರೀತಿಯಾ ಮರೆತು ನಾ ಹೇಗೆ ಬಾಳಲ್ಹೇಳು ?

Filed under: Uncategorized — kemmayi @ 6:35 am

ಒಲವಿನ ಜೀವ ಸುಧೆಗೆ..,

ಅರೆರೆ, ಆಗಲೇ, ಬರಾಬ್ಬರಿ 5 ವರುಶ ಆಯ್ತು ನೋಡು, ನಿಂಗೆ ಪತ್ರ ಬರೆದು. ನೀನಿಲ್ಲ್ದೆ ಕಳೆ ದ  5 ಯುಗಗಳು….ಅಬ್ಬಾ…. ಭಯ ಆಗತ್ತೆ. ಇವತ್ಯಾಕೋ  ಬರೆಯಲೇ ಬೇಕೆನ್ನಿಸಿ ದೆ. ಯಾಕೆ ಗೊತ್ತಾ ? ನೀನು ಮರೆತಿರಬಹುದು. ಆದರೆ ನಂಗೆ ಹಾಗಲ್ಲ ನೋಡು, ನಮ್ಮ ಪ್ರೇಮಕ್ಕೆ ಮೊಹರು ಬಿದ್ದ ದಿನ ಇವತ್ತು. ಕಾಲೇಜಿನ್ ಕ್ಲಾಸ್ ರೂಮಿನಲ್ಲಿ ಘಂ ಟಾ ಘೋಶವಾಗಿ, ನಾನು ನಿನ್ನನ್ನು ಪ್ರೀತಿಸ್ತೇನೆ ಅಂತ ಹೇಳಿಕೊಂಡ ದಿನ. ಅದಕ್ಕೇ     ಇಸ್ಟೊಂದು ಹಹಪಹಪಿಕೆ.

ಅದು ಮೂರರ ಸಂಜೆ. ಆಗ ತಾನೇ ಸೋನೆ ಮಳೆ ಸುರಿಯುತ್ತಿತ್ತು. ಖಾಲಿಯಾದ ಕಾರಿಡಾರಿನ  ಬಳ ನಾನು ನಿಂತಿದ್ದೆ, ಮಳೆ ಕಡಿಮೆಯಾಗುವುದನ್ನೇ ನಿರೀಕ್ಸಿಸುತ್ತಾ. ನೀನ್ಯಾಕೋ ಮುಂದೆ ಹೋದವಳು  ಕೂಡಾ ತಿರುಗಿ ಬಂದು. ನಂಗೆ ಕೊಡೆ ಹಿಡಿದೆ. ಕಣ್ಣಲ್ಲಿ ವಾತ್ಸಲ್ಯವಿತ್ತು. ನಿನ್ನ ಒಲವಿನ  ಕರೆಗೆ ಬೇಡ ಅನ್ನುವ  ಗತ್ತು ನನ್ನಲ್ಲಿರಲಿಲ್ಲ. ಮರುದಿನ ಕಾಲೇಜು ತಂಬಾ ಗುಲ್ಲೋ ಗುಲ್ಲು. ನಮಗೇ ಅರಿವಿಲ್ಲದೆ, ನಾವು ಪ್ರೇಮ ಸಾಮ್ರಾಜ್ಯದಲ್ಲಿ  ದಾಖಲಾದೆವು. ನನ್ನ ಚಿಗುರು ಮೀಸೆಯ ಅಡಿಯಲ್ಲಿ ಸ್ವಲ್ಪ   ದರ್ಪವಿತ್ತು.  ಹಾಗಾಗಿ ನಾನು ಪ್ರೀತಿಸಲ್ಲ ಅಂದೆ.  ಏಸೊಂದು ನಿರ್ದಯಿ ನೋಡು ನಾನು.

ದಿನವೂ ಇದೇ ಕತೆ  ಕೇಳಿ ಸಾಕಾಗಿದ್ದ ನಿನಗೆ ಹೊಸ ಕಾಲೇಜು, ಹೊಸ ಗೆಳೆಯರು ಬರೆ ಒಂದೇ ತಿಂಗಳಿಗೆ ಬೋರಾದರು. ನಿನ್ನ ಕಂದಿದ ಮುಖ ನೋಡೋದಕ್ಕೆ ನನ್ನಿಂದ ಸಾದ್ಯವಾಗಲಿಲ್ಲ. ಕೊನೆಗೆ ಕ್ಲಾಸಿನಲ್ಲೇ ಎಲ್ಲರ ಎದುರಿಗೆ ಹೇಳಿದೆ… ನಿನ್ನ ಪರ್ಮಿಶನ್ನೂ  ಇಲ್ಲದೆ!

ಅದಾಗಿ, ಒ0ದು ತಿಂಗ ಳು ಬೇಕಾಯಿತು ನೋಡು ಪ್ರೀತಿಗೆ ನಿನ್ನ ಸಹಿ ಬೇಳಲು. ಆಮೇಲೆ ನಡೆದಿದ್ದೆಲ್ಲಾ  ಬರೀ ಕತೆ. ಅದೇಸು ಕನಸು ಕಂಡಿದ್ದೆವು. ಅದೇಸು ಚಿತ್ತಾರ ಬರೆದಿದ್ದೆವು. ನನಗೆ ಕೊಡೆ  ಹಿಡಿದ ಹುಡುಗಿಯ ಕ್ಯ್ ಹಿಡಿಯೋ ಭಾಗ್ಯ ನನ್ನದು ಅಂದು ಕೊಳ್ಳುವಾಗಲೇ….. ನೀನು ನನ್ನ ಬಾಳಿನಿಂದ ಎದ್ದು ಹೋಗಿದ್ದೆ.  ಅದು ಮೇ 2, 2004. ಅಂತಿಮ ವರುಶದ ಪರೀಕ್ಷೆ ಬರೆಯುತ್ತಿದ್ದೆ. ಇನ್ನೆರಡೇ ಎರಡು ವಾರ ಕಳೆದಿರುತ್ತಿದ್ದರೆ, ನಿನ್ನ   ಮುಂದೆ ಚಕ್ಕಳ ಮಕ್ಕಳ ಹಾಕಿಕೊಂಡು, ಮತ್ತದೇ ಹಾಡು ಹಾಡ್ತಿದ್ದೆ. …. ತನುವು ನಿನ್ನದು ಮನವೂ ನಿನ್ನದು…

ಆದರೆ ಅದ್ಯಾರೋ ಹೇಳಿದರು, ನಿಂಗೆ ಮದುವೆ ಆಯ್ತಂತೆ ! ಪರೀಕ್ಷೆಗೂ ಓದದೆ ಅಳ್ತಾ ಕೂತಿದ್ದೆ. ಬದುಕಿನ್ ಹಾದಿಯಲ್ಲಿ ಕವಲು ದಾರಿಯ ತನಕ ನಡೆದು ಬಂದಿದ್ದೆ. ದಾರಿ ಹುಡುಕಬೇಕಿತ್ತು.  ಅದೇ ಸಮಯಕ್ಕೆ ನೀನು ನಿನ್ನ ದಾರಿ ಹಿಡಿದಿದ್ದೆ. ಕೊಡೆಗೂ ಕಾಸಿಲ್ಲದವನು ಬೇಡವಾಗಿದ್ನಾ ನಿಂಗೆ ? 5 ವರುಶ ಉಸಿರಿನ.. ಘಾಡವಾಗಿ ಪ್ರೀತಿಸಿದ್ದೆ. ಅದು ಬೇಡವಾಗಿತ್ತಾ ? ಗೊತ್ತಿಲ್ಲ. ಉತ್ತರ ಕೇಳುವ ಪುರುಸೋತ್ತು ನನಗಿರಲಿಲ್ಲ. ಕಾರಣ ಹೇಳುವ ತಾಳ್ಮೆ, ಅನಿವಾರ್ಯತೆಯೂ ನಿನಗಿರಲಿಲ್ಲ.

ನೀನೀಗ ತುಂಬಾ ನೆನಪಾಗ್ತೀಯಾ. ನಿನ್ನನ್ನು ಮರೀಬೇಕೂಂತ ಅದೇಸು ಸಲ ಪ್ರಯತ್ನ  ಮಾಡಿದ್ದೇನೆ. ಕ್ಷಣ ಗೆದ್ದು… ನಿರಂತರ ಸೋತಿದ್ದೇನೆ! ನಿನ್ನನ್ನು ಮರೆಯಲೇಬೇಕು ಅನ್ನೋ ಕೋಪವೋ ? ನಿರ್ದಯತೆಯೋ ? ದಡ್ಡತನವೋ ? ನಿಸ್ಸಾಹಯಕತೆಯೋ ? ಅರ್ತಹೀನ ಸೆಡವೋ ? ಉತ್ತರ ಸಿಗುತ್ತಿಲ್ಲ. ಮೂರು ವರುಶ – ಮತ್ತೆ ಮೂರು ತಿಂಗಳಾಯ್ತು. ಇವತ್ತಿಗೂ ಒಬ್ಬನೇ ಇದ್ದೇನೆ. ನಟ್ಟ ಮದ್ಯಾಹ್ನವೂ ನನಗ್ಯಾಕೋ ಕತ್ತಲು ಕತ್ತಲು ಅನ್ನಿಸ್ತಾ ಇದೆ. ದೀಪವೂ ನಿನ್ನದೇ… ಗಾಳಿಯೂ ನಿನ್ನದೇ  ಅಂತಾ ದಿನಾ ಕಿವಿಯಲ್ಲಿ ಹಾಡ್ತಾ ಇದ್ದೆ. ಆದ್ರೆ ನೀನೇ ದೀಪ ಆರಿಸಿ ಹೋದ ಮೇಲೆ, ಬೆಳಕೆಲ್ಲಿಯದು ಹೇಳು ?

 ನಿತ್ಯ ರಾತ್ರೆಗಳನ್ನು ಕಾರಣವಿಲ್ಲದೇ ಪುಡಿಗಟ್ಟುತ್ತಿದ್ದೇನೆ.  ಮಗ್ಗುಲು ಬದಲಿಸಿದರೆ ಮತ್ತೊಂದು ಕನಸು ಬಿಚ್ಚಿಕೊಳ್ಳುತ್ತದೆ. ಛಕ್ಕನೆ ಎದ್ದು ಕೂರುತ್ತೇನೆ, ನೀನಾಗ್ಲೇ ದೂರ…ಹುಡುಗೀ ನೀನು ನನ್ನೊಳಗಿನ ಜೀವ ಸುದೆ… ಅದಕ್ಕೇ ಮರೆಯಲಾಗುವುದಿಲ್ಲ.

ನಿನ್ನ ಪೆದ್ದು ಹುಡುಗ .

July 20, 2007

ಗಭ೯ಪಾತ

Filed under: Uncategorized — kemmayi @ 4:57 am

’ನೀ ಒಲ್ಲೆ’- ಎಂದಾಗ ಚೀರಿದ್ದು
ಕನಸು. ಹಾರಿದ್ದೇ ಎತ್ತರ್ ಎತ್ತರ
ಬ್ಲು ಎತ್ತರಕ್ಕೇ. ಕಾಮೋ೯ಡದ
ಅಂಚಿನಿಂದ ಇಣುಕಿ ನಕ್ಕು ಛೇಡಿಸಿತು
ಗ್ರೀಶ್ಮದ ಕಾಮನ ಬಿಲ್ಲಿನ ಹಾಗೆ,
ಬಣ್ಣ ಬಣ್ಣಗಳು ತುಂಬಿ.
ಪುಕ್ಕ ಬೆಳೆಯಿತೆಂದು ರೆಕ್ಕೆ ಕಟ್ಟಿ ಹಾರಿದೆ
ಹಿಡಿಯಲು, ಕರಗುವ ಮೊದಲು..
ಬೆಳ್ಳಿಹಸುವಿನ ಮರೆಯಲ್ಲಿ ಇಈನವಾಗಿತ್ತು
ಕನಸು ! ಕೆಯ್ ಚಾಚಿದೆ
ಸಿಕ್ಕಿದ್ದು ಬ್ರಿಯ್ ಬಿಸಿಲ ಕೋಲು.

ಕನಸುಗಳ ಗಭ೯ಪಾತವಾಗಿತ್ತು.

– ಪ್ರೀತು ಕೆಮ್ಮಾಯಿ

July 17, 2007

ಎರಡು ಹನಿ

Filed under: Uncategorized — kemmayi @ 5:35 am

ವಸಂತ ಸುರಿಸಿದ
ಇಬ್ಬನಿ
ಕರಗುವ್ ಮುನ್ನವೇ
ಗ್ರೀಶ್ಮ ಸುರಿಸಬೇಕೇ
ಕಂಬನಿ

-ಕೆಮ್ಮಾಯಿ
——–
ಸವಿ ನೆನಪುಗಳೇ…
ಹುಚ್ಚು ಮನಸ್ಸಿನಿಂದ
ಕೊಚ್ಚಿ ಹೋಗುವ ಮುನ್ನ
ನನಗೊಂದು ಮಾತು
ಹೇಳಿ ಹೋಗಬಾರದಿತ್ತೇ ?

-ಕೆಮ್ಮಾಯಿ

Hello world!

Filed under: Uncategorized — kemmayi @ 4:03 am

Welcome to WordPress.com. This is your first post. Edit or delete it and start blogging!

Blog at WordPress.com.